Posts

Showing posts from April, 2012

ದುರಂತಮಯ ಬದುಕು, ಆದರೂ ಜನರಿಗೆ ಕೊಟ್ಟರು ಕುಚುಕು!

Image
ಮೇಜರ್ ಬಾರ್ಬರಾ! ಇದು ವಿಶ್ವವಿಖ್ಯಾತ ಲೇಖಕ, ವಿಮರ್ಶಕ, ನೊಬೆಲ್ ಪುರಸ್ಕೃತ ಜಾರ್ಜ್ ಬರ್ನಾರ್ಡ್ ಷಾ ಅವರ ನಾಟಕ. ಈ ಬರ್ನಾರ್ಡ್ ಷಾಗೂ ಬ್ರಿಟನ್್ನ ಲೆಜೆಂಡರಿ ಪ್ರಧಾನಿ ವಿನ್್ಸ್ಟನ್ ಚರ್ಚಿಲ್್ಗೂ ಆಗಾಗ್ಗೆ ಜಟಾಪಟಿ ನಡೆಯುತ್ತಿರುತ್ತಿತ್ತು. ಅದು ಬಹಳಷ್ಟು ಸಲ ಅವಹೇಳನಕಾರಿಯಾಗಿರುತ್ತಿದ್ದರೂ ಆ ನಿಂದನೆಯಲ್ಲೂ ಒಂದು  Class,  ಶ್ರೇಷ್ಠತೆ ಇರುತ್ತಿತ್ತು. ಒಮ್ಮೆ ‘ಮೇಜರ್ ಬಾರ್ಬರಾ’ ನಾಟಕ ಏರ್ಪಡಾಯಿತು. ಸಾಮಾನ್ಯವಾಗಿ ನಾಟಕಗಳು ರಾತ್ರಿ ವೇಳೆ ನಡೆಯುತ್ತವೆ. ವಿನ್್ಸ್ಟನ್ ಚರ್ಚಿಲ್್ಗೆ ಟೆಲಿಗ್ರಾಂ ಮಾಡಿದ ಬರ್ನಾರ್ಡ್ ಷಾ, “ಫಸ್ಟ್ ನೈಟ್್”ಗೆ (ಮೊದಲ ಪ್ರದರ್ಶನಕ್ಕೆ) ನಿಮಗಾಗಿ 2 ಆಸನಗಳನ್ನು ಕಾದಿರಿಸಿದ್ದೀನಿ, ಜತೆಗೊಬ್ಬ ಸ್ನೇಹಿತರನ್ನೂ ಕರೆದುಕೊಂಡು ಬನ್ನಿ, ಒಂದು ವೇಳೆ ಇರುವುದೇ ಆದರೆ… ಎಂಬ ಕುಟುಕು ಸಂದೇಶ ಕಳುಹಿಸಿದರು! ಅದಕ್ಕೆ ಪ್ರತಿಯಾಗಿ ಚರ್ಚಿಲ್ ಕೂಡ ಚಚ್ಚಿದರು- ‘ಫಸ್ಟ್ ನೈಟ್್’ಗೆ ಬರುವುದಕ್ಕಂತೂ ಸಾಧ್ಯವಿಲ್ಲ, ‘ಸೆಕೆಂಡ್ ನೈಟ್್’ಗೆ ಖಂಡಿತಾ ಬರುತ್ತೇನೆ, ಒಂದು ವೇಳೆ ಅದನ್ನು ನೀವು ಇಟ್ಟುಕೊಂಡರೆ… ಇವರಿಬ್ಬರ ತಾಕಲಾಟಗಳು ಇಂದು ದಂತಕತೆಯಾಗಿವೆ. ನಮ್ಮಲ್ಲೂ ಒಬ್ಬರು ಕರ್ನಾಟಕದ ಬರ್ನಾರ್ಡ್ ಷಾ ಎಂದು ಖ್ಯಾತರಾಗಿದ್ದರು. ಅವರೇ ರಾಯಸಂ ಭೀಮಸೇನ ರಾವ್ ಅಲಿಯಾಸ್ ಬೀ Chi! ಅವರದ್ದು ದುರಂತಮಯ ಬಾಲ್ಯ. ಅದನ್ನು ಅವರ ಆತ್ಮಚರಿತ್ರೆ ‘ನನ್ನ ಭಯಾಗ್ರಫಿ’ಯಲ್ಲಿ ಮಾರ್ಮಿಕವಾಗಿ ವರ್ಣಿಸುತ್ತಾರೆ. ‘ಅರ್ಜುನ ಅದ...